ಬೆಂಗಳೂರು :ನವೆಂಬರ್ 05: ಗಣಿ-ಭೂ ವಿಜ್ಞಾನ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಪ್ರತಿಮಾ(37) ಅವರ ಕತ್ತುಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ನಗರದ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ
ಪತಿಯಿಂದ ವಿಚ್ಛೇಧನ ಪಡೆದಿದ್ದಂತ ಪ್ರತಿಮಾ ಒಂಟಿಯಾಗಿ ವಾಸವಾಗಿದ್ದರು ಎನ್ನಲಾಗಿದೆ. ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಅವರ ಪತಿ ಮತ್ತು ಮಗ ವಾಸಾವಗಿದ್ದಾರೆ.
ರಾತ್ರಿ ಇಲಾಖೆಯ ವಾಹನದಲ್ಲಿಯೇ 8 ಗಂಟೆಗೆ ಮನೆಗೆ ಪ್ರತಿಮಾ ಬಂದಿದ್ದರು. ಅವರ ಅಣ್ಣ ಎಷ್ಟೇ ಬಾರಿ ಕರೆ ಮಾಡಿದ್ರೂ ಕರೆ ಸ್ವೀಕರಿಸಿದಂತ ಕಾರಣ, ಬೆಳಗ್ಗೆ ಮನೆಗೆ ಬಂದು ನೋಡಿದಾಗ ಪ್ರತಿಮಾ ಅವರನ್ನು ಕತ್ತುಕೊಯ್ದು ಬರ್ಬರವಾಗಿ ಹತ್ಯೆ ಮಾಡಿರೋ ವಿಷಯ ಬೆಳಕಿಗೆ ಬಂದಿದೆ.
ಇದರಿಂದಾಗಿ ಬೆಚ್ಚಿಬಿದ್ದಂತ ಪ್ರತಿಮಾ ಅಣ್ಣ, ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದಂತ ಪೊಲೀಸರು ಮನೆಯನ್ನು ಪರಿಶೀಲಿಸಿದಾಗ ಯಾವುದೇ ವಸ್ತುಗಳು ಕಳುವಾಗಿಲ್ಲ ಅಂತ ತಿಳಿದು ಬಂದಿದೆ. ಹೀಗಾಗಿ ಇದೊಂದು ಉದ್ದೇಶ ಪೂರ್ವಕ ಕೊಲೆಯಾಗಿರೋ ಶಂಕೆ ವ್ಯಕ್ತವಾಗಿದೆ. ಅಲ್ಲದೇ ಯಾರೋ ಪರಿಚಯಸ್ತರೇ ಕೊಲೆ ಮಾಡಿ ಪರಾರಿಯಾಗಿರೋ ಅನುಮಾನ ವ್ಯಕ್ತ ಪಡಿಸಿದ್ದು, ತನಿಖೆ ಕೈಗೊಂಡಿದ್ದಾರೆ.