ಬೆಂಗಳೂರು : ನವೆಂಬರ್ 25: ದ್ರಶ್ಯ ನ್ಯೂಸ್ : ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ನಮನ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಧನ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ಶುಕ್ರವಾರ ರಾತ್ರಿ 9.30ರ ಹೊತ್ತಿಗೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಪ್ರಾಂಜಲ್ ಅವರ ಪಾರ್ಥೀವ ಶರೀರ ಆಗಮಿಸಿದ್ದು, ಈ ವೇಳೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರು ಹುತಾತ್ಮ ಪ್ರಾಂಜಲ್ ಅವರಿಗೆ ಅಂತಿಮ ಗೌರವ ನಮನ ಸಲ್ಲಿಸಿದರು.