ಉಡುಪಿ:ಡಿಸೆಂಬರ್ 13:ರೈಲು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿಸೆಂಬರ್ 11 ರ ರಾತ್ರಿ ವೇಳೆ ನಡೆದಿದೆ. ಮೃತರನ್ನು ಹೆರಂಜೆಯ ಜಗದೀಶ(40) ಎಂದು ಗುರುತಿಸಲಾಗಿದೆ. ಕೊಳಲ ಗಿರಿಯಲ್ಲಿ ಮರದ ಕೆಲಸ ಮಾಡಿಕೊಂಡಿದ್ದ ಇವರು, ಕೆಲಸ ಮುಗಿಸಿ ಮನೆಗೆ ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ, ರೈಲು ಆಕಸ್ಮಿಕವಾಗಿ ಡಿಕ್ಕಿ ಹೊಡೆದಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ಜಗದೀಶ್ ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.