ಡಿಸೆಂಬರ್ 18:ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಂಪನ್ನಗೊಂಡಿದೆ. ಮುಂಜಾನೆ 7.33 ರ ಧನುರ್ ಲಗ್ನದ ಮುಹೂರ್ತದಲ್ಲಿ ಸುಬ್ರಹ್ಮಣ್ಯ ಆದಿಯಾಗಿ ಉಮಾಮಹೇಶ್ವರ ದೇವರಿಗೆ ನಡೆದ ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯ ಭಕ್ತಾಧಿಗಳು ಪಾಲ್ಗೊಂಡರು
ಹದಿನಾರು ದಿನಗಳ ಕಾಲ ನಡೆಯುವ ಜಾತ್ರೋತ್ಸವದ ಕಾರ್ಯಕ್ರಮಗಳಲ್ಲಿ ಕ್ಷೇತ್ರದಲ್ಲಿ ಮೂರು ದಿನಗಳ ಆಚರಣೆಗಳು ವಿಶಿಷ್ಟವಾಗಿರುತ್ತದೆ.ಚೌತಿ, ಪಂಚಮಿ ಹಾಗೂ ಷಷ್ಠಿಯಂದು ಇಲ್ಲಿ ವಿಶೇಷ ಸೇವೆಯಾದ ಎಡೆಮಡಸ್ನಾನದ ಜೊತೆಗೆ ಕ್ಷೇತ್ರಾಧಿಪತಿಯಾದ ಸುಬ್ರಹ್ಮಣ್ಯ ಸ್ವಾಮಿ ಹಾಗೂ ಉಮಾಮಹೇಶ್ವರ ದೇವರಿಗೆ ರಥೋತ್ಸವವೂ ನಡೆಯುತ್ತದೆ.