ಡಿಸೆಂಬರ್ 19:ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾ ಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ), ಪಂಚಾ ಯಿತಿ ಕಾರ್ಯದರ್ಶಿ ಗ್ರೇಡ್ -1 ಮತ್ತು ಗ್ರೇಡ್-2 ಹಾಗೂ ಎಸ್ಡಿಎ ಹುದ್ದೆಗಳಿಗೆ ‘ಜಿಲ್ಲಾವಾರು ನೇಮಕಾತಿ’ ನಡೆಯಲಿದ್ದು, ಒಬ್ಬ ಅಭ್ಯರ್ಥಿ ಒಂದು ಜಿಲ್ಲೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಕಾರ್ಯದರ್ಶಿ ಮತ್ತು ಪಿಡಿಒ ಹುದ್ದೆ ಸೇರಿ 1 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಇದರಲ್ಲಿ ಸುಮಾರು 733 ಹುದ್ದೆಗಳಿಗೆ ನೇಮಕಾತಿ ನಡೆಸಲು ಕೆಪಿಎಸ್ಸಿಗೆ ಪಂಚಾಯತ್ ರಾಜ್ ಇಲಾಖೆ ಯಿಂದ ಕೆಲವು ದಿನಗಳ ಹಿಂದೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಪ್ರಸ್ತಾವನೆಯನ್ನು ಪರಿಶೀಲಿಸಿ ರುವ ಕೆಪಿಎಸ್ಸಿ, ಈ ಹುದ್ದೆಗಳಿಗೆ ಸಂಬಂಧಿಸಿ ದಂತವೃಂದಮತ್ತು ನೇಮಕಾತಿನಿಯಮಗಳಲ್ಲಿ ಕೆಲವು ಅಗತ್ಯ ಮಾರ್ಪಾಡುಗಳನ್ನು ಮಾಡಿ ಹೊಸದಾಗಿ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದೆ ಎಂದು ತಿಳಿದು ಬಂದಿದೆ.
ಅಧಿಸೂಚನೆ ಹೊರಡಿಸಿದ ನಂತರದ ಯಾವುದೇ ಹಂತದಲ್ಲೂ ಅಡೆತಡೆಗಳು ಎದುರಾಗದಂತೆ ಸುಸೂತ್ರವಾಗಿ ಕಾಲಮಿತಿಯಲ್ಲಿ ಪ್ರಕ್ರಿಯೆ ಪೂರ್ಣಗೊಳಿಸುವ ಉದ್ದೇಶವಿದೆ ಎಂದು ಕೆಪಿಎಸ್ಸಿ ಕಾರ್ಯದರ್ಶಿ ಕೆ.ಎಸ್. ಲತಾಕುಮಾರಿ ತಿಳಿಸಿದ್ದಾರೆ.
ಆಯ್ಕೆಯಾಗು ವವರಿಗೆ ತಮ್ಮದಲ್ಲದ ಊರಿನಲ್ಲಿ ಪೋಸ್ಟಿಂಗ್ ಸಿಕ್ಕರೆ, ಕೆಲವೇ ವರ್ಷಗಳಲ್ಲಿ ಅವರು ತಮ್ಮ ಪಾಲಕರು, ಕುಟುಂಬ, ಪತ್ನಿ ಇರುವ ಊರಿಗೆ ವರ್ಗಾವಣೆಗೆ ಪ್ರಯತ್ನಿಸುತ್ತಾರೆ. ಶಿಕ್ಷಣ ಇಲಾಖೆ ಮತ್ತು ಪೊಲೀಸ್ ಇಲಾಖೆಯಲ್ಲಿ ಈ ಸಮಸ್ಯೆ ತೀವ್ರವಾಗಿದೆ. ಹೀಗಾಗಿ, ಜಿಲ್ಲಾವಾರು ನೇಮಕ ಮಾಡುವುದರಿಂದ ಈ ಸಮಸ್ಯೆ ಇರು ವುದಿಲ್ಲ. ಅಭ್ಯರ್ಥಿಗಳು ಅರ್ಜಿಸಲ್ಲಿಸುವಾಗಲೇ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನೇಮಕದ ಬಳಿಕ ಅದೇ ಜಿಲ್ಲೆಯಲ್ಲಿ ಕೆಲಸ ಮಾಡಬೇಕು. ಬದಲಾವಣೆಗೆ ಅವಕಾಶ ಇರುವುದಿಲ್ಲ ಎಂದು ಕೆಪಿಎಸ್ಸಿ ಮೂಲಗಳು ತಿಳಿಸಿವೆ.