ಉಡುಪಿ : ಡಿಸೆಂಬರ್ 20: ದ್ರಶ್ಯ ನ್ಯೂಸ್ :ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಕೃಷ್ಣಾಪುರ ಮಠ ಉಡುಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯಕ್ಷಗಾನ ಕಲಾರಂಗ ರಿ. ಉಡುಪಿ, ಯಕ್ಷ ಶಿಕ್ಷಣ ಟ್ರಸ್ಟ್ ರಿ. ಉಡುಪಿ ಇದರ ಸಹಯೋಗದಲ್ಲಿ ಆಯೋಜಿಸಿದ್ದ ಕಿಶೋರ ಯಕ್ಷಗಾನ ಸಂಭ್ರಮ 2023 ಇದರ ಸಮಾರೋಪ ಸಮಾರಂಭದಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ ಅಧ್ಯಕ್ಷರಾದ ಉಡುಪಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿದರು.
ಸಮಾರಂಭದಲ್ಲಿ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಪರಮ ಪೂಜ್ಯ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಆಶೀರ್ವಚಿಸಿ ಅನುಗ್ರಹಿಸಿದರು.
ಸಮಾರಂಭದಲ್ಲಿ ಗಣ್ಯರಾದ ಶ್ರೀ ನಿ. ಬಿ. ವಿಜಯ ಬಲ್ಲಾಳ್, ಶ್ರೀ ತಲ್ಲೂರು ಶಿವರಾಮ ಶೆಟ್ಟಿ, ಶ್ರೀ ವಿಶ್ವನಾಥ ಶೆಣೈ, ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಗಣಪತಿ, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಶ್ರೀ ಗಂಗಾಧರ ರಾವ್, ಉಪಾಧ್ಯಕ್ಷರಾದ ಶ್ರೀ ಎಸ್. ವಿ. ಭಟ್, ಪ್ರಧಾನ ಕಾರ್ಯದರ್ಶಿ ಶ್ರೀ ಮುರಳಿ ಕಡೆಕಾರ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.