ಉಡುಪಿ :ಡಿಸೆಂಬರ್ 21:ದ್ರಶ್ಯ ನ್ಯೂಸ್ : ಈ ಬಗ್ಗೆ ಉಜ್ವಲ ಯೋಜನೆಯ ನೋಡಲ್ ಅಧಿಕಾರಿ ರಾಹುಲ್ ಅವರನ್ನು ಸಂಪರ್ಕಿಸಿ ವೈರಲ್ ಆಗಿರುವ ಸಂದೇಶದ ಕುರಿತು ಪ್ರಶ್ನಿಸಿದಾಗ, ಅದೊಂದು ಫೇಕ್ ಸುದ್ದಿ ಎಂದು ತಳ್ಳಿ ಹಾಕಿದರು. ಕೆವೈಸಿ ಮಾಡಿರುವವರಿಗೆ ಸಬ್ಸಿಡಿ ಮತ್ತೆ ನೀಡುವ ಹಾಗೂ ಮಾಡಿಸದಿದ್ದವರಿಗೆ ಸಿಲಿಂಡರ್ ಒಂದರ ದರ ಹೆಚ್ಚಾಗುವ ಸುದ್ದಿ ಸಂಪೂರ್ಣ ಸುಳ್ಳು ಎಂದು ಸ್ಪಷ್ಟಪಡಿಸಿದರು.
ಕೇಂದ್ರದ ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ಸಚಿವಾಲಯ ದಿಂದ ಬಂದಿರುವ ನೋಟಿಫಿಕೇಷನ್ನಲ್ಲಿ ಕೇಂದ್ರ ಸರಕಾರದ ಉಜ್ವಲ (ಪಿಎಂಯುವೈ) ಹಾಗೂ ಪಹಲ್ ಯೋಜನೆಯ ಫಲಾನುಭವಿಗಳ ಗ್ಯಾಸ್ ಸಂಪರ್ಕವನ್ನು ಆಧಾರ್ ದೃಢೀಕರಣದೊಂದಿಗೆ ಆದ್ಯತೆಯ ನೆಲೆಯಲ್ಲಿ ಕೆವೈಸಿ ಮಾಡುವ ಸೂಚನೆ ಮಾತ್ರ ಇದ್ದು ಬೇರೆ ಯಾವುದೇ ಪ್ರಸ್ತಾಪವೂ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಗ್ಯಾಸ್ ಸಂಪರ್ಕ ಹೊಂದಿರುವವರೆಲ್ಲರೂ ಕೈವೈಸಿ ಮಾಡಿಸಬೇಕು. ಆದರೆ ಅವರಿಗೆ ಯಾವುದೇ ಸಮಯವನ್ನು ನಿಗದಿ ಪಡಿಸಿಲ್ಲ.ಕೊನೆಯ ದಿನವನ್ನೂ ತಿಳಿಸಿಲ್ಲ. ಸಬ್ಸಿಡಿ ಮತ್ತೆ ನೀಡುವ ಪ್ರಸ್ತಾಪವಂತೂ ಇಲ್ಲವೇ ಇಲ್ಲ. ಈಗ ಉಜ್ವಲ ಫಲಾನು ಭವಿಗಳನ್ನು ಹೊರತು ಪಡಿಸಿ ಬೇರೆ ಯಾರಿಗೂ ಅನಿಲದ ಸಿಲಿಂಡರ್ನಲ್ಲಿ ಸಬ್ಸಿಡಿ ಸಿಗುತ್ತಿಲ್ಲ. ಬಳಕೆದಾರರು ಗೊಂದಲಕ್ಕೊಳ ಗಾಗಬಾರದು ಎಂದು ಅವರು ತಿಳಿಸಿದರು.
ಘಟನೆಯ ವಿವರ ಇ-ಕೆವೈಸಿ ಮಾಡಿಸಿಕೊಳ್ಳಲು ಏಕಾಏಕಿ ಗ್ಯಾಸ್ ಏಜೆನ್ಸಿಗಳ ಕಚೇರಿಗೆ ಧಾವಿಸುತ್ತಿರುವ ದೃಶ್ಯ ಜಿಲ್ಲೆಯಾದ್ಯಂತ ಕಂಡುಬರುತ್ತಿದೆ.ಆಧಾರ್ ಲಿಂಕ್ ಮಾಡಿಸಿ, ಇ-ಕೆವೈಸಿ ಮಾಡದೇ ಇದ್ದರೆ ಸಬ್ಸಿಡಿ ಬರುವುದಿಲ್ಲ, ಗೃಹ ಬಳಕೆಯ ಸಂಪರ್ಕ ವಾಣಿಜ್ಯ ಬಳಕೆಯ ಗ್ಯಾಸ್ ಸಂಪರ್ಕವಾಗಿ ಬದಲಾಗಲಿದೆ, ಗ್ಯಾಸ್ ಸಂಪರ್ಕ ರದ್ದಾಗಲಿದೆ ಎಂಬಿತ್ಯಾದಿ ಸುಳ್ಳು ಸಂದೇಶ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರು ಗೊಂದಲಕ್ಕೆ ಒಳಗಾಗಿ ಮಂಗಳವಾರ ಬೆಳಗ್ಗಿನಿಂದಲೇ ಗ್ಯಾಸ್ ಏಜೆನ್ಸಿಗಳ ಕಚೇರಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಲು ಸರತಿ ಸಾಲ್ಲಿನಲಿ ಬರುತಿದ್ದಾರೆ
ಗ್ಯಾಸ್ ಸಂಪರ್ಕ ಇರುವವರು ಡಿ. 31ರೊಳಗೆ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ ಮತ್ತು ಗ್ಯಾಸ್ ಏಜೆನ್ಸಿ ನೀಡಿರುವ ಪುಸ್ತಕ ಅಥವಾ ಕಾರ್ಡ್ನೊಂದಿಗೆ ಏಜೆನ್ಸಿ ಕಚೇರಿಗೆ ಭೇಟಿ ನೀಡಿ, ಕೆವೈಸಿ ಮಾಡಿಸಬೇಕು. ಕೆವೈಸಿ ಮಾಡಿಸಿದರೆ ಜ. 1ರಿಂದ ಸಬ್ಸಿಡಿ ಬರುತ್ತದೆ. ಈಗ ಇರುವ ಸಿಲಿಂಡರ್ಗೆ 903 ರೂ. ಇದ್ದು, ಸಬ್ಸಿಡಿಯ ಅನಂತರ 500 ರೂ.ಗಳಿಗೆ ಸಿಗುತ್ತದೆ. ಕೆವೈಸಿ ಮಾಡದಿದ್ದರೆ ಸಬ್ಸಿಡಿ ರಹಿತವಾಗಿ ಗ್ಯಾಸ್ ಸಂಪರ್ಕವು ಕಮರ್ಶಿಯಲ್ ಆಗಿ ಮಾರ್ಪಡುತ್ತದೆ. ಆಗ ಗ್ಯಾಸ್ಗೆ 1,400 ರೂ. ನೀಡಬೇಕಾಗುತ್ತದೆ ಎಂಬಿತ್ಯಾದಿ ಸಂದೇಶ ಎಲ್ಲೆಡೆ ಹರಿದಾದಡಿತ್ತು