ಉಡುಪಿ :ಡಿಸೆಂಬರ್ 23:ದ್ರಶ್ಯ ನ್ಯೂಸ್ :ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ 2022-23 ನೇ ಸಾಲಿನ ಕಾರ್ಮಿಕರ ಕಲ್ಯಾಣ ನಿಧಿ ಯೋಜನೆಯ ಅಡಿಯಲ್ಲಿರುವ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಹಾಗೂ ವಿದ್ಯಾರ್ಥಿ ವೇತನ ಕಡಿತಗೊಳಿಸಿರುವ ರಾಜ್ಯ ಸರ್ಕಾರದ ವಿರುದ್ಧ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆಯನ್ನು ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಸಂಚಾಲಕರಾದ ಅಜಿತ್ ಜೋಗಿ ಇವರು ರಾಜ್ಯ ಸರಕಾರದ ಗ್ಯಾರಂಟೀ ಪಟ್ಟಿಯಲ್ಲಿ ವಿದ್ಯಾರ್ಥಿ ವೇತನವಿಲ್ಲವೆಂದು ಅಸಡ್ಡೆಯೇ ಎಂದು ಪ್ರಶ್ನಿಸಿ ವಿದ್ಯಾರ್ಥಿ ವೇತನ ಗ್ಯಾರಂಟೀಯಾಗಲಿ ಎಂದು ಆಗ್ರಹಿಸಿದರು.
ನಗರ ಕಾರ್ಯದರ್ಶಿ ಶ್ರೀವತ್ಸ ಮಾತನಾಡಿ 4 ಲಕ್ಷ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವುದನ್ನು ರದ್ದುಗೊಳಿಸಿರುವ ಸರಕಾರ ಎಲ್ಲರಿಗೂ ಈ ಕೂಡಲೇ ವಿದ್ಯಾರ್ಥಿ ವೇತನ ನೀಡಬೇಕು ಮತ್ತು ಯಾವುದೇ ರೀತಿಯ ಕಡಿತವನ್ನು ಮಾಡಿ ವಿದ್ಯಾರ್ಥಿಗಳ ಜೀವನದಲ್ಲಿ ಆಟವಾಡಬರದು ಎಂದು ಆಗ್ರಹಿಸಿದರು.
ಹುತಾತ್ಮರ ಸ್ಮಾರಕದ ಬಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಫಲಕಗಳನ್ನು ಪ್ರದರ್ಶಿಸಿದರು. ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸಂಹಿತಾ ಕೆ. ನಗರ ಖೆಲೋ ಭಾರತ್ ಪ್ರಮುಖರಾದ ಸ್ವಸ್ತಿಕ್ ನಗರ ಸಂಪರ್ಕ ಪ್ರಮುಖ್ ರವಿಚಂದ್ರ ಮತ್ತು ಪ್ರಮುಖರಾದ ಕಿಶೋರ್, ನವೀನ್, ಹರ್ಷೇಂದ್ರ, ವರುಣ್, ಪ್ರಷ್ಮಾ, ಮಂಗಳಗೌರಿ, ಕೃತಿ, ಭಾಗವಹಿಸಿದರು.