ಉಡುಪಿ:ಡಿಸೆಂಬರ್ ರಾಜ್ಯ ಸರಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಲಾಗಿದ್ದರೂ, ಇದುವರೆಗೆ ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಐ.ಪಿ.ಗಡಾದ್ ತಿಳಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬರುತಿದ್ದರೂ, ಜಿಲ್ಲೆಯಲ್ಲಿ ಮಾತ್ರ ಇದುವರೆಗೆ ಯಾರೂ ಕೋವಿಡ್ಗೆ ಪಾಸಿಟಿವ್ బందిల్ల ಎಂದ ಅವರು, ಕೋವಿಡ್ಗೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಇಲಾಖೆ ನೀಡುತ್ತಿರುವ ಎಲ್ಲಾ ಮಾರ್ಗಸೂಚಿಗಳನ್ನು ಪಾಲನೆ ಮಾಡಲಾಗುತ್ತಿದೆ ಎಂದರು.
ಕೊರೋನಾ ಪರೀಕ್ಷೆ ಹಾಗೂ ಸಂಬಂಧಿಸಿದಂತೆ ಮಣಿಪಾಲ ಚಿಕಿತ್ಸೆಗೆ ಮಾಹೆ, ಡಾ.ಟಿಎಂಎ ಪೈ ಆದರ್ಶ ಆಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳೊಂದಿಗೆ ಮಾತುಕತೆಯನ್ನು ನಡೆಸಲಾಗುತ್ತಿದೆ. ಹಿಂದಿನಂತೆ ಎಲ್ಲಾ ರೀತಿಯ ಸಹಕಾರ ವನ್ನು ನೀಡುವ ಭರವಸೆಯನ್ನು ಅವರು ನೀಡಿದ್ದಾರೆ. ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಒಟ್ಟಾರೆ 4700 ಹಾಸಿಗೆಗಳಿದ್ದು, ಇವುಗಳಲ್ಲಿ ಅಗತ್ಯ ಬಿದ್ದರೆ 2000ಕ್ಕೂ ಅಧಿಕ ಹಾಸಿಗೆಗಳನ್ನು ಕೊರೋನ ಪಾಸಿಟಿವ್ ಬಂದವರ ಚಿಕಿತ್ಸೆಗೆ ಕಾಯ್ದಿರಿಸಲು ನಿರ್ಧರಿಸಲಾಗಿದೆ ತಿಳಿಸಿದರು.
ಜಿಲ್ಲಾಸ್ಪತ್ರೆಯ ಆರ್ಟಿಪಿಸಿಆರ್ ಪ್ರಯೋಗಾಲಯವನ್ನು ಸನ್ನದ್ಧ ಸ್ಥಿತಿಯಲ್ಲಿ ರಿಸಲಾಗಿದೆ. ಸದ್ಯ ಎಲ್ಲಾ ಸ್ಯಾಂಪಲ್ಗಳ ಪರೀಕ್ಷೆ ಇಲ್ಲೇ ನಡೆಯುತ್ತಿದೆ. ಬೆಡ್, ವಾರ್ಡ್, ವೆಂಟಿಲೇಟರ್, ಐಸಿಯು, ಎಲ್ಲವನ್ನೂ ಸಜ್ಜುಗೊಳಿಸಿದ್ದೇವೆ ಡಾ.ಗಡಾದ್ ತಿಳಿಸಿದರು.