ಉಡುಪಿ :ಜನವರಿ 02:ದ್ರಶ್ಯ ನ್ಯೂಸ್ :ದಿನಾಂಕ ೧-೧-೨೦೨೪ರಂದು ಕೋಟೇಶ್ವರ ದ ಡಾಕ್ಟರ್ ಎನ್ ಆರ್ ಆಚಾರ್ಯ ಸ್ಮಾರಕಆಸ್ಪತ್ರೆಯಲ್ಲಿ ರಾತ್ರಿ೧೧-೧೦ಕ್ಕೆ ನಿಧನರಾದರು.
ಪಯಣ,ಪಲಾಯನ, ಪರಿಭ್ರಮಣ,ಪದರಗಳು, ಕಾದಂಬರಿಗಳು. ಸಾತತ್ತೆಗೊಂದು ಸನ್ಮಾನ,ಸೆಕ್ರೆಟರ ಸಾಹೇಬರ ಹೆಂಡತಿ ಮತ್ತು ಇತರ ಕಥೆಗಳು ಹಾಗೂ ಅಸ್ತಮಾ ಕೊಂಕಣಿ ಕಾದಂಬರಿ ಸೇರಿದಂತೆ ಒಟ್ಟು ಇಪ್ಪತ್ತಕ್ಕೂ ಹೆಚ್ಚು ಕೃತಿ ಬರೆದಿದ್ದಾರೆ. ಅತ್ಯುತ್ತಮ ಸಂಘಟಕರು, ಅಂಕಣ ಬರೆಹಗಾರರಾಗಿದ್ದರು. ಹತ್ತು ವರ್ಷಗಳ ಕಾಲ ಚಡಗ ಕಾದಂಬರಿ ಪ್ರಶಸ್ತಿ ಸಮಿತಿಯ ಸಂಚಾಲಕರಾಗಿ ಸೇವೆ ಸಲ್ಲಿಸಿದ್ದರು.
ಸಾಹಿತ್ಯ , ಸಂಘಟನೆ, ಪತ್ರಿಕೋದ್ಯಮ ಈ ಕ್ಷೇತ್ರದಲ್ಲಿ ಇವರ ಸೇವೆ ಅನನ್ಯವಾದುದು.
ಇವರ ನಿಧನ ಸಾಂಸ್ಕೃತಿಕ ಕ್ಷೇತ್ರ ಕ್ಕೆ ತುಂಬಾ ಲಾರದ ನಷ್ಟ ವೆಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ,ಹಾಗೂ ಡಾ.ಎನ್. ಭಾಸ್ಕರಾಚಾರ್ಯರು, ಲೇಖಕ ಪ್ರಕಾಶಕರು ಅತೀವ ಶೋಕ ವ್ಯಕ್ತಪಡಿಸಿದ್ದಾರೆ.