ಉಡುಪಿ : ಜನವರಿ 12. ಧ್ರಶ್ಯ ನ್ಯೂಸ್ : ಜ.18ರಂದು ನಡೆಯುವ ಪುತ್ತಿಗೆಮಠದ ಪರ್ಯಾಯಕ್ಕೆ ಪೂರ್ವಭಾವಿಯಾಗಿ ಕಳೆದ ಮೂರು ದಿನಗಳಿಂದ ವಿವಿಧ ಸಂಘಟನೆಗಳು ಹಾಗೂ ಗ್ರಾಮಗಳ ವತಿಯಿಂದ ನಡೆಯುತ್ತಿರುವ ಹಸಿರು ಹೊರೆ ಕಾಣಿಕೆಯಲ್ಲಿ ಇಂದು ಬೈಂದೂರು ತಾಲೂಕು, ಕುಂದಾಪುರ ತಾಲೂಕು, ಬ್ರಹ್ಮಾವರ ತಾಲೂಕು, ಮಂದಾರ್ತಿ ವಲಯ , ಕೋಟ ವಲಯ,ಉಪ್ಪುರು,ಹಾವಂಜೆ ವಲಯ,ಕಲ್ಯಾಣಪುರ ಸಂತೆಕಟ್ಟೆ ವಲಯ, ಸಗ್ರಿ ,ಚಕ್ರತೀರ್ಥ ವಲಯ, ಪೇರಂಪಳ್ಳಿವಲಯ, ಕೊಡವೂರು ವಲಯದ ಹೊರೆಕಾಣಿಕೆ ಸಮರ್ಪಣೆ – ಮೆರವಣಿಗೆಯು ಜೋಡುಕಟ್ಟೆಯಿಂದ ಪ್ರಾರಂಭಗೊಂಡು ಡಯಾನ ವೃತ್ತದಿಂದ ಕೆ.ಎಂ.ಮಾರ್ಗ, ತ್ರಿವೇಣಿ ವೃತ್ತದ ಮೂಲಕ ಕನಕದಾಸ ರಸ್ತೆಯಲ್ಲಿ ಸಾಗಿ ರಥಬೀದಿ ಮೂಲಕ ಹೊರೆಕಾಣಿಕೆ ಉಗ್ರಾಣವಾಗಿರುವ ರಾಜಾಂಗಣ ಪಾರ್ಕಿಂಗ್ ಪ್ರದೇಶಕ್ಕೆ ತೆರಳಿತು.
ವಿವಿಧ ವಸ್ತುಗಳು, ತರಕಾರಿಯ ರೂಪದಲ್ಲಿ ಹಸಿರು ಹೊರೆ ಕಾಣಿಕೆಯನ್ನು ಮೆರವಣಿಗೆಯಲ್ಲಿ ತಂದು ಅರ್ಪಿಸಲಾಯಿತು.