ಬೆಂಗಳೂರು : ಫೆಬ್ರವರಿ 08:ಇಂದು ಬೆಂಗಳೂರಿನ ವಿಧಾನಸೌಧಕ್ಕೆ ಹಿಂದೆ ಎಂದಿಗೂ ಇಲ್ಲದಂತ ಜನಸಾಗರವೇ ಹರಿದು ಬಂದಿದೆ. ಇದಕ್ಕೆ ಕಾರಣ ಸಿಎಂ ಜನಸ್ಪಂದನ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಲ್ಲಿ 12,372 ಅರ್ಜಿಗಳು ಸ್ವೀಕೃತಗೊಂಡಿದ್ದರೇ, 246 ಅರ್ಜಿಗಳನ್ನು ಸ್ಥಳದಲ್ಲೇ ಸಿಎಂ ಸಿದ್ಧರಾಮಯ್ಯ ವಿಲೇವಾರಿ ಮಾಡಿದ್ದಾರೆ.
ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಇಂದು ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದ ಮುಂದೆ ನಡೆದಂತ ಜನಸ್ಪಂದನ ಕಾರ್ಯಕ್ರಮದಲ್ಲಿ 12,372 ಅರ್ಜಿಗಳು ಸ್ವೀಕೃತಗೊಂಡಿದ್ದಾವೆ. 20,000 ಮಂದಿ ಪಾಲ್ಗೊಂಡಿದ್ದಾರೆ ಎಂದು ತಿಳಿಸಿದೆ.
ಜನಸ್ಪಂದನ ಕಾರ್ಯಕ್ರಮಕ್ಕೆ ಭಾಗಿಯಾಗಿ ಅಹವಾಲು ಸಲ್ಲಿಸಿದ ಎಲ್ಲರಿಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಆತ್ಮೀಯ ಸ್ಪಂದನೆ ದೊರೆತಿದೆ. ಮೊದಲ ಜನಸ್ಪಂದನ ಕಾರ್ಯಕ್ರಮದ ಫಲಶೃತಿ ಸ್ವೀಕೃತ 5 ಸಾವಿರ ಅರ್ಜಿಗಳ ಪೈಕೆ ಶೇ.98ರಷ್ಟು ಅಹವಾಲುಗಳ ವಿಲೇವಾರಿಯಾಗಿದೆ ಎಂದು ತಿಳಿಸಿದೆ.
ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆ ಹರಿಸುತ್ತಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ. ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ 98% ಪರಿಹಾರ ದೊರಕಿವೆ. ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು… pic.twitter.com/HkFmxRzvly
— DIPR Karnataka (@KarnatakaVarthe) February 8, 2024
ಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆ ಹರಿಸುತ್ತಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ. ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ 98% ಪರಿಹಾರ ದೊರಕಿವೆ. ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಎಲ್ಲಾ ಅರ್ಜಿಗಳನ್ನೂ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಒಂದು ತಿಂಗಳೊಳಗೆ ಹೆಚ್ಚು ಅರ್ಜಿ , ಅಹವಾಲು ಪರಿಗಣಿಸಿ ಎಂದು ಡಿಸಿ, ಸಿಇಒ ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.