ಮಂಗಳೂರು, ಏಪ್ರಿಲ್ 10: ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಲಿದ್ದಾರೆ.
ಆದ್ರೆ ಇದೀಗ ಮಂಗಳೂರಿನಲ್ಲಿ ನಡೆಯಬೇಕಿದ್ದ ಬಿಜೆಪಿ ಬೃಹತ್ ಸಮಾವೇಶ ರದ್ದಾಗಿದೆ. ಹೀಗಾಗಿ ಮೊದಲಿಗೆ ಮೋದಿ ಮೈಸೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮಂಗಳೂರಿನಲ್ಲಿ ಸಮಾವೇಶದ ಬದಲಿಗೆ ಸುಮಾರು 2.5 ಕಿ.ಮೀ. ರೋಡ್ ಶೋ ಮಾತ್ರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಏಪ್ರಿಲ್ 14ರ ಸಂಜೆ 5 ಗಂಟೆಗೆ ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಮೊದಲಿಗೆ ನಾರಾಯಣಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮೋದಿ ರೋಡ್ ಶೋ ಆರಂಭಿಸಲಿದ್ದಾರೆ. ಲೇಡಿಹಿಲ್ ನಾರಾಯಣಗುರು ವೃತ್ತದಿಂದ ಹಂಪನಕಟ್ಟೆವರೆಗೆ ಸುಮಾರು 2.5 ಕೀ.ಮಿ ರೋಡ್ ಶೋ ನಡೆಯಲಿದೆ. ಲಾಲ್ಬಾಗ್, ಮಂಗಳೂರು ಪಾಲಿಕೆ ಕಚೇರಿ, ಬಳ್ಳಾಲ್ಬಾಗ್, ಎಂ.ಜಿ.ರಸ್ತೆ, PVS ವೃತ್ತ, ನವಭಾರತ ವೃತ್ತ, ಕೆ.ಎಸ್.ರಾವ್ ರಸ್ತೆ ಮೂಲಕ ಹಂಪನಕಟ್ಟೆ ಸಿಗ್ನಲ್ನಲ್ಲಿ ರೋಡ್ ಶೋ ಅಂತ್ಯವಾಗಲಿದೆ.
ಲೇಡಿಹಿಲ್ ನಾರಾಯಣ ಗುರು ಸರ್ಕಲ್ ನಿಂದ ಆರಂಭವಾಗಲಿರೋ ರೋಡ್ ಶೋ.
ಬಳಿಕ ಲಾಲ್ ಭಾಗ್ ನ ಮಂಗಳೂರು ಪಾಲಿಕೆ ಕಚೇರಿ ಎದುರು ತಲುಪಲಿದೆ.
ಆ ಬಳಿಕ ಬಳ್ಳಾಲ್ ಭಾಗ್ ದಾಟಿ ಎಂ.ಜಿ ರಸ್ತೆಯಲ್ಲಿ ಸಾಗಲಿರೋ ರೋಡ್ ಶೋ.
ಪಿವಿಎಸ್ ಸರ್ಕಲ್ ಬಳಿ ಬಲಕ್ಕೆ ತಿರುಗಿ ನವಭಾರತ್ ಸರ್ಕಲ್ ತಲುಪಲಿರೋ ರೋಡ್ ಶೋ.
ನಂತರ ಕೆ.ಎಸ್.ರಾವ್ ರಸ್ತೆ ಮೂಲಕ ಸಾಗಿ ಹಂಪನಕಟ್ಟೆ ಸಿಗ್ನಲ್ ಬಳಿ ರೋಡ್ ಶೋ ಅಂತ್ಯ
ಏಪ್ರಿಲ್ 14ರಂದು ಮಂಗಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಬಿಜೆಪಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಆದ್ರೆ, ಇದೀಗ ಕೆಲ ಕಾರಣಾಂತರಗಳಿಂದ ಈ ಸಮಾವೇಶ ರದ್ದಾಗಿದ್ದು, ಸಮಾವೇಶದ ಬದಲು ಸುಮಾರು 2.5 ಕಿ.ಮೀ ರೋಡ್ ಶೋ ರೋಡ್ ಶೋ ನಡೆಸಲಿದ್ದು, ರೂಟ್ ಮ್ಯಾಪ್ ಸಹ ಸಿದ್ಧವಾಗಿದೆ.