ಕಾರ್ಕಳ: ಏಪ್ರಿಲ್ 30: ಮುಂದಿನ ಮೂರು ತಿಂಗಳಲ್ಲಿ ಮಣಿಪಾಲದಲ್ಲಿ ರೊಬೋಟಿಕ್ ಸರ್ಜರಿ ಆರಂಭವಾಗಲಿದೆ ಎಂದು ಮಣಿಪಾಲ ಸಮೂಹ ಆಸ್ಪತ್ರೆಗಳ ಮುಖ್ಯಸ್ಥರಾದ ಡಾ ಸುದರ್ಶನ್ ಬಲ್ಲಾಳ್ ತಿಳಿಸಿದರು
ಅವರು ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಯಲ್ಲಿ ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಹಾಗೂ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇದರ ಆಶ್ರಯದಲ್ಲಿ ನಡೆದ ಬೆಂಗಳೂರಿನ
ಖ್ಯಾತ ಮೂತ್ರಪಿಂಡ ಡಾ ಸುದರ್ಶನ್ ಬಲ್ಲಾಳ್ ಇವರಿಂದ ಮಾಧ್ಯಮದವರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು
ಮೂತ್ರಪಿಂಡ ಕಾಯಿಲೆ ಮೂತ್ರಪಿಂಡ ಕಾಯಿಲೆ ಲಕ್ಷಣಗಳು ಮೂತ್ರ ಪಿಂಡ ಕಾಯಿಲೆಯ ಮುಂಚಿನ ಎಚ್ಚರಿಕೆ ಚಿಹ್ನೆಗಳು ಯಾವುವು ಮತ್ತು ರೋಗವನ್ನು ನಿರ್ವಹಿಸುವಲ್ಲಿ ಆರಂಭಿಕ ಪತ್ತೆ ಎಷ್ಟು ಮುಖ್ಯ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಸಾಮಾನ್ಯ ಆರೋಗ್ಯ ಸಮಸ್ಯೆಗೆ ಮತ್ತು ಮೂತ್ರಪಿಂಡ ಕಾಯಿಲೆ ಗೆ ಹೇಗೆ ಸಂಬಂಧ
ಈ ರೋಗವು ಮುಂದುವರೆದಂತೆ ಹೆಚ್ಚಾಗಿ ಎದುರಿಸುವ ಪ್ರಮುಖ ತೊಡಕು, ಸಮಸ್ಯೆ, ಮೂತ್ರಪಿಂಡ ಕಾಯಿಲೆಯನ್ನು ನಿರ್ವಹಿಸುವಲ್ಲಿ ಆಹಾರವು ಯಾವ ಪಾತ್ರವನ್ನು ವಹಿಸುತ್ತದೆ ಮತ್ತು ರೋಗಿಗಳು ಅನುಸರಿಸಬೇಕಾದ ಯಾವುದೇ ನಿರ್ದಿಷ್ಟ ಆಹಾರ ಮಾರ್ಗಸೂಚಿಗಳು
ಇತರ ಕಾಯಿಲೆಯ ಔಷಧಿಗಳು ಮೂತ್ರಪಿಂಡ ತೊಂದರೆಗೆ ಕಾರಣ
ದೀರ್ಘಕಾಲದ ಮೂತ್ರಪಿಂಡ ಕಾಯಿಲೆಗೆ ಲಭ್ಯವಿರುವ ವಿವಿಧ ಚಿಕಿತ್ಸಾ ಆಯ್ಕೆ
ಮೂತ್ರಪಿಂಡ ಕಸಿ, ಕಿಡ್ನಿ ತೊಂದರೆಗೆ ಪರಿಹಾರ
ಕಿಡ್ನಿ ಕಸಿನಂತರ ಡಯಾಲಿಸಿಸ್ನ ಅವಶ್ಯಕತೆ,
ಮೂತ್ರಪಿಂಡ ದಾನ , ದಾನನಂತರ ದಾನಿಗಳು ವಹಿಸಬೇಕಾದ ಮುಂಜಾಗರೂಕತಾ ಕ್ರಮಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು
ಈ ಸಂದರ್ಭದಲ್ಲಿ ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ ಸಹ ಕುಲಾಧಿಪತಿ ಹೆಚ್ ಎಸ್ ಬಲ್ಲಾಳ್, ಡಾ ಟಿ ಎಂ ಎ ಪೈ ರೋ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ ಕೀರ್ತಿನಾಥ ಬಲ್ಲಾಳ್
ಮಾಹೆ ಉಪಕುಲಪತಿ ಡಾ ಎಂ ಡಿ ವೆಂಕಟೇಶ್, ವ್ಯವಸ್ಥಾಪಕ ಮೋಹನ್ ಶೆಟ್ಟಿ ಉಪಸ್ಥಿತರಿದ್ದರು