ಬೈಂದೂರು: ಜುಲೈ 08:ಜಿಲ್ಲೆಯಾದ್ಯಂತ ಮಳೆ ಬಿರುಸುಗೊಂಡ ಪರಿಣಾಮವಾಗಿ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುವ ಆತಂಕ ಸೃಷ್ಟಿಯಾಗಿದೆ.
ಬೈಂದೂರು,ಕುಂದಾಪುರ ವ್ಯಾಪ್ತಿಯಲ್ಲಿ ಇಂದು ಹಲವೆಡೆ ಮನೆ, ಕೃಷಿ ಪ್ರದೇಶಗಳಿಗೆ ನೆರೆನೀರು ನುಗ್ಗಿತ್ತು. ಸೋಮವಾರ ಮಳೆ ಕಡಿಮೆಯಾಗದ ಕಾರಣ ಪ್ರವಾಹದ ನೀರು ಇಳಿಕೆಯಾಗಿಲ್ಲ.
ಬೈಂದೂರು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದ ಪರಿಣಾಮವಾಗಿ ಕೆಲವೆಡೆ ಅಪಾರ ಹಾನಿ ಸಂಭವಿಸಿದೆ. ಬೈಂದೂರಿನ ಕೆಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಕೃಷಿಗೂ ಹಾನಿ ಸಂಭವಿಸಿದೆ. ಶಾಸಕ ಗುರುರಾಜ್ ಗಂಟಿಹೊಳೆ ಅವರು ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಹಾನಿಗೊಳಗಾದ ಪ್ರದೇಶವನ್ನು ಪರಿಶೀಲನೆ ನಡೆಸಿದರು.
ಎಡೆಬಿಡದೆ ಸುರಿಯುತ್ತಿರುವ ಮಳೆಯು ಇನ್ನಷ್ಟು ಅಪಾಯ ತಂದೊಡ್ಡುವ ಭೀತಿ ಇದ್ದು, ಕ್ಷೇತ್ರದ ಜನರು ಸಂಭವಿಸುವ ಅಪಾಯಗಳ ಬಗ್ಗೆ ಜಾಗರೂಕರಾಗಿರಬೇಕೆಂದು ಜನರಲ್ಲಿ ಅವರು ಮನವಿ ಮಾಡಿದ್ದಾರೆ.
ಹಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಸೌಪರ್ಣಿಕಾ ನದಿ ನೀರಿನ ಮಟ್ಟ ಹೆಚ್ಚಾಗಿದ್ದು, ನದಿಯ ಅಕ್ಕ ಪಕ್ಕ ಪ್ರದೇಶಗಳಾದ ನಾವುಂದ, ಸಾಲ್ಬುಡ, ಬಡಾಕೆರೆ, ನಾಡ, ಕಡ್ಕೆ, ಮರವಂತೆ, ಪಡುಕೋಣೆ, ಚಿಕ್ಕಳ್ಳಿ, ಸಂಸಾಡಿ, ಹೆಮ್ಮುಂಜಿ, ಕೋಣ್ಕಿ ಪ್ರದೇಶಗಳಿಗೆ ಭೇಟಿ ನೀಡಿ ನೆರೆಯಿಂದ ಸಾವಿರಾರು ಎಕ್ರೆಯ ಬತ್ತದ ಕಟ್ಟಿ ಮತ್ತು ತೆಂಗಿನ ಊಟ ಸಂಪೂರ್ಣ ಜಲಾವೃತವಾಗಿದೆ
ಬಡಾಕೆರೆ ಗದ್ದೆಯ ಮಧ್ಯದಲ್ಲಿ ವಿದ್ಯುತ್ ಕಂಭವಾಲಿದೆ.ನೆರೆಯಿಂದ ಮನೆಗಳಿಗೆ ವಿಷಕಾರಿ ಹಾವುಗಳು ಅಪಾಯದ ಸೂಚನೆಯನ್ನು ಸೂಚಿಸುತ್ತದೆ.