ಕಾರ್ಕಳ:ಆಗಸ್ಟ್ 08: ಅಜೆಕಾರು ಸಮೀಪದ ಕುಕ್ಕುಜೆಯಲ್ಲಿ ರಿಕ್ಷಾ ಚಾಲಕನೋರ್ವನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಆರೋಪದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಅಜೆಕಾರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರು ಠಾಣೆಗೆ ದೂರು ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕುಕ್ಕುಜೆ ರಿಕ್ಷಾ ನಿಲ್ದಾಣದಲ್ಲಿದ್ದ ಚಾಲಕ ನಿತ್ಯಾನಂದ ಕುಲಾಲ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರಾದ ದೀಪಕ್ ಶೆಟ್ಟಿ ಮತ್ತು ಅಂಕಿತ್ ಎಂಬವರು ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ ನಿಲ್ದಾಣದಲ್ಲಿದ್ದ ಚಾಲಕರಾದ ಉದಯ್ ನಾಯ್ಕ್ ಮತ್ತು ರೂಪೇಶ್ ಪೂಜಾರಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾಗುತ್ತಿದ್ದು, ಈ ಕುರಿತಾಗಿ ಕುಕ್ಕುಜೆ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಅಜೆಕಾರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನಿತ್ಯಾನಂದ ಕುಲಾಲ್ ಬಿಜೆಪಿ ಕಾರ್ಯಕರ್ತನಾಗಿದ್ದು ತಾನು ವಾಟ್ಸಪ್ ಸ್ಟೇಟಸ್ಗೆ ಹಾಕಿರುವ ವೀಡಿಯೋ ವಿಚಾರವಾಗಿ ದೀಕ್ಷಿತ್, ಅಂಕಿತ್ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ನಿತ್ಯಾನಂದ ಕುಲಾಲ್ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತ ದೀಕ್ಷಿತ್ ಸಹ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.