ಉಡುಪಿ: ಆಗಸ್ಟ್ 09:ಜ್ಯುವೆಲರಿ ಅಂಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಡುಪಿಯ ಶಂಕರ(45) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕರ್ತವ್ಯದ ವೇಳೆ ಬಂಗಾರವು ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದು, ಇದರ ಹಣವನ್ನು ನೀಡುವಂತೆ ಅಂಗಡಿ ಮಾಲಕರು ತಿಳಿಸಿದ್ದರು ಎಂದು ತನ್ನ ತಾಯಿಯ ಬಳಿ ತಿಳಿಸಿದ್ದರು. ಆದರೆ ಹಣವನ್ನು ಹೊಂದಿಸಲು ಸಾಧ್ಯವಾಗದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ