ಉಡುಪಿ :ಆಗಸ್ಟ್ 09:ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆಯ ನಾಗಾಲ್ಯಾದಲ್ಲಿರುವ ಶ್ರೀನಾಗರಾಜ ನಾಗರಾಣಿಯರ ಸನ್ನಿಧಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ಸಾಮೂಹಿಕವಾದ ನಾಗ ತನು ತಂಬಿಲ ಸೇವೆ ಪಂಚಾಮೃತ ಅಭಿಷೇಕ ಪ್ರಸನ್ನ ಪೂಜೆ ಕ್ಷೇತ್ರದ ಧರ್ಮದ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಅರ್ಚಕ ಅನೀಶ್ ಆಚಾರ್ಯರ ನೇತೃತ್ವದಲ್ಲಿ ಬಹು ವಿಜೃಂಭಣೆಯಿಂದ ಸಂಪನ್ನಗೊಂಡಿತು.
ಮಧ್ಯಾಹ್ನ ಮಹಾ ಅನ್ನಸಂತರ್ಪಣೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡರು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ ತಿಳಿಸಿರುತ್ತಾರೆ