ಉಡುಪಿ : ಆಗಸ್ಟ್ 10:ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಇದರ ನವೀಕೃತ ಹಾಗೂ ವಿಸ್ತರಿತ ನವೀಕೃತ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ, ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿದರು.
ಸಮಾರಂಭವನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕರಾದ ನಾಡೋಜ ಡಾ. ಜಿ.ಶಂಕರ್ ಉದ್ಘಾಟಿಸಿ ಶುಭ ಹಾರೈಸಿದರು
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರ ಸರ್ಕಾರದ ಸಹಕಾರಿ ಸಚಿವಾಲಯದ ನೂತನ ರಾಷ್ಟೀಯ ಸಹಕಾರಿ ನೀತಿ ಅಧ್ಯಕ್ಷರಾದ ಶ್ರೀ ಸುರೇಶ್ ಪ್ರಭು, ಗಣ್ಯರಾದ ಶ್ರೀ ಗುಜ್ಜಾಡಿ ಪ್ರಭಾಕರ ನಾಯಕ್, ಶ್ರೀ ಜಯಕರ ಶೆಟ್ಟಿ ಇಂದ್ರಾಳಿ, ಶ್ರೀ ಭುವನೇಂದ್ರ ಕಿದಿಯೂರು, ಶ್ರೀ ಸಾಧು ಸಾಲ್ಯಾನ್, ಶ್ರೀ ಹರಿಯಪ್ಪ ಕೋಟ್ಯಾನ್, ಶ್ರೀ ಬಿ. ಎನ್. ಶಂಕರ ಪೂಜಾರಿ, ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕರು, ಸಿಬ್ಬಂದಿಗಳು, ವಿವಿಧ ಸಹಕಾರಿ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.