ಉಡುಪಿ : ಆಗಸ್ಟ್ 15:ಉಡುಪಿಯ ಪ್ರತಿಷ್ಟಿತ ಸ್ಮರಣಿಕಾ ಸಂಸ್ಥೆಯಲ್ಲಿ ವಾರ್ಷಿಕೋತ್ಸವ ಹಾಗೂ ನೂತನ ವರ್ಷದ ಕ್ಯಾಲೆಂಡರ್ ಹಾಗೂ ಗಿಫ್ಟ್ ವಸ್ತುಗಳ ಬಿಡುಗಡೆ ಕಾರ್ಯಕ್ರಮ ಇಂದು ಆಗಸ್ಟ್ 15ರಂದು ಹಮ್ಮಿಕೊಳ್ಳಲಾಗಿತ್ತು
ಸಮಾರಂಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ,ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ, ಖ್ಯಾತ ವೈದ್ಯರಾದ ಶ್ರೀ ಕೃಷ್ಣ ಪ್ರಸಾದ್, ಸಂಸ್ಥೆಯ ಮಾಲಿಕರಾದ ಶ್ರೀ ದಿವಾಕರ ಸನಿಲ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.