ಉಡುಪಿ :ಆಗಸ್ಟ್ 25: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಇಂದು (ಆಗಸ್ಟ್ 25) ಶ್ರೀ ಲಲಿತಾ ಸಹಸ್ರ ಕದಳಿ ಮಹಾಯಾಗ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಸೀತಾರಾಮ್ ಭಟ್ ಇವರ ನೇತೃತ್ವದಲ್ಲಿ ನೆರವೇರಲಿದೆ.
ಯಾಗವು ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿದ್ದು ಮಧ್ಯಾಹ್ನ ಗಂಟೆ 12:30ಕ್ಕೆ ಪೂರ್ಣಾಹುತಿಯಾಗಲಿದೆ. ಯಾಗದ ಅಂಗವಾಗಿ ಬ್ರಾಹ್ಮಣ ಸುವಾಸಿನಿ ಆರಾಧನೆ ಕನ್ನಿಕರಾಧನೆ ಸಂತರ್ಪಣೆ ನೆರವೇರಲಿದೆ..
ಶ್ರೀಚಕ್ರ ಪೀಠ ಸುರಪೂಜಿತೆ ರಾಜರಾಜೇಶ್ವರಿ ಯನ್ನು ಆರಾಧಿಸಿ ಅನುಗ್ರಹ ಯಾಚಿಸುವ ಈ ಮಹಾನ್ ಯಾಗವು ಮುಂಬೈಯ ಪಾರ್ಸಿ ಕುಟುಂಬದವರಿಂದ ಸಮರ್ಪಿತವಾಗಲಿದೆ ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ