ಉಡುಪಿ, ಆಗಸ್ಟ್ .31 ಜಲ ಸಂಪನ್ಮೂಲವನ್ನು ರಕ್ಷಿಸಲು ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಬಳಸದೇ ಮಣ್ಣಿನ ಮೂರ್ತಿ ಯನ್ನು ಬಳಸಿ, ನಿರ್ದಿಷ್ಟ ಸ್ಥಳಗಳಲ್ಲಿಯೇ ಮೂರ್ತಿಯನ್ನು ವಿಸರ್ಜನೆ ಮಾಡಬೇಕು ಎಂದು ಉಡುಪಿ ನಗರಸಭಾ ಪೌರಾಯುಕ್ತರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿ ಸ್ಥಾಪಿಸಲು ನಗರಸಭೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಗಣೇಶ ವಿಸರ್ಜನೆಯ ಮೆರವಣಿಗೆಯಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು, ಸೌಂಡ್ ಸಿಸ್ಟಮ್ ಬಳಸಬೇಕು. ಗಣೇಶನ ಮೂರ್ತಿಯನ್ನು ವಿಸರ್ಜಿಸುವಾಗ ಮೂರ್ತಿಗೆ ಹಾಕಲಾದ ಹೂವಿನ ಹಾರಗಳನ್ನು, ಇತರೆ ಅಪಾಯಕಾರಿ ಸಾಮಾಗ್ರಿಗಳನ್ನು ತೆಗೆದು ಸೂಕ್ತವಾಗಿ ವಿಲೇವಾರಿ ಮಾಡಿ ಮೂರ್ತಿಯನ್ನು ಮಾತ್ರ ವಿಸರ್ಜನೆ ಮಾಡಬೇಕು.
ಗಣೇಶನ ಆರಾಧನೆ ವೇಳೆ ಬಳಸುವ ಹೂವು ಅಥವಾ ಇತರೆ ಯಾವುದೇ ವಸ್ತುವನ್ನು ನೀರಿನ ಮೂಲಗಳಲ್ಲಿ ವಿಸರ್ಜಿಸು ವಂತಿಲ್ಲ. ಗಣೇಶ ಪ್ರತಿಷ್ಠಾಪನೆ ಮಾಡಿ ಆರಾಧಿಸುವ ಸ್ಥಳಗಳಲ್ಲಿ ಸೂಕ್ತ ತ್ಯಾಜ್ಯ ವಿಲೇವಾರಿಗೆ ಯಾವುದೇ ವ್ಯವಸ್ಥೆ ಬೇಕಾ ದಲ್ಲಿ ನಗರಸಭೆಯ ಆರೋಗ್ಯ ವಿಭಾಗವನ್ನು ಸಂಪರ್ಕಿ ಸಬಹುದು. ಧಾನ್ಯ, ಹೂವಿನ ಬೀಜ ಹಾಗೂ ತರಕಾರಿ ಬೀಜಗಳನ್ನು ಒಳಗೊಂಡ ಗಣೇಶ ಮೂರ್ತಿಯನ್ನು ಬಳಸಲು ಆದ್ಯತೆ ನೀಡಿ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬವನ್ನು ಆಚರಿಸುವಂತೆ ಪೌರಾಯುಕ್ತರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.