ಮೈಸೂರು, ಸೆಪ್ಟೆಂಬರ್ 20: ಈ ಬಾರಿಯ ಮೈಸೂರು ದಸರಾವನ್ನು ಸಾಹಿತಿ ಹಂಪ ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದಾರೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ದಸರಾಕ್ಕೆ ಮೈಸೂರಿನಲ್ಲಿ ತಯಾರಿ ಆರಂಭವಾಗಿದೆ. ಈಗಾಗಲೇ ಗಜಪಡೆ ತಾಲೀಮು ಆರಂಭವಾಗಿದೆ. ಅಕ್ಟೋಬರ್ 3 ರಂದು ಮೈಸೂರು ದಸರಾಕ್ಕೆ ಚಾಲನೆ ಸಿಗಲಿದೆ
ರಾಜ್ಯದಲ್ಲಿನ ಬರ ಪರಿಸ್ಥಿತಿಯ ಕಾರಣ ಕಳೆದ ವರ್ಷ ಸರಳವಾಗಿ, ಸಾಂಪ್ರದಾಯಿಕ ದಸರಾ ಹಬ್ಬವನ್ನು ಆಚರಿಸಲಾಗಿತ್ತು. ಆದರೆ, ಈ ವರ್ಷ ಉತ್ತಮ ಮುಂಗಾರು ಮಳೆ ಆಗಿರುವುದರಿಂದ ಅದ್ದೂರಿಯಾಗಿ ದಸರಾ ಆಚರಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ