ಹುಬ್ಬಳ್ಳಿ:ಏಪ್ರಿಲ್ 15 : ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಹತ್ಯೆ ಮಾಡಿದ್ದ ಆರೋಪಿ, ಗುಂಡಿಗೆ ಬಲಿಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದೆ. ಇನ್ನೇರಡು ದಿನಗಳಲ್ಲಿ ಸಿಐಡಿ ತನಿಖೆ ಆರಂಭಿಸುವ ಸಾಧ್ಯತೆ ಇದೆ.
ಪ್ರಕರಣದ ತನಿಖೆಗಾಗಿ ತಜ್ಞರ ತಂಡ ರಚಿಸುವಂತೆ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಪಿಐಎಲ್ ಸಲ್ಲಿಸಿದೆ.
ಎನ್ಕೌಂಟರ್ನಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳ ದೂರವಾಣಿ ಕರೆ ವಿವರ (ಸಿಡಿಆರ್) ಪರಿಶೀಲಿಸಬೇಕು. ವೈರ್ಲೆಸ್ ಲಾಗ್ ಬುಕ್ ಪರಿಶೀಲನೆಗೆ ನಿರ್ದೇಶಿಸಲು ಮನವಿ ಮಾಡಿದೆ. ಮೃತನ ದೇಹದ ಅಂತ್ಯಕ್ರಿಯೆ ಮಾಡದಂತೆ ತಡೆಗೆ ಮತ್ತು ಸಾಕ್ಷ್ಯನಾಶ ಆಗದಂತೆ ಕ್ರಮಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದೆ.