ಬೈಂದೂರು : ಬಾರಿ ಮಳೆಯಿಂದಾಗಿ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತಗರ್ಸೆ ಗ್ರಾಮದ ನೀರೋಡಿ ಎಂಬ ಗ್ರಾಮೀಣ ಪ್ರದೇಶಕ್ಕೆ ಕಳೆದ ವರ್ಷ ಪಟ್ಟಣ ಪಂಚಾಯಿತಿ ವತಿಯಿಂದ 3 ಲಕ್ಷ ಅನುದಾನದಲ್ಲಿ ನಿರ್ಮಾಣ ಮಾಡಿದ್ದ ಕಿರು ಸೇತುವೆ ಸಂಪೂರ್ಣ ಕೊಚ್ಚಿಕೊಂಡು ಹೋಗಿದೆ
ಈ ಕಿರು ಸೇತುವೆ .ಶಾಲಾ ವಿದ್ಯಾರ್ಥಿಗಳಿಗೆ ರೈತರಿಗೆ ಕೂಲಿ ಕಾರ್ಮಿಕರಿಗೆ ಮಾರ್ಗ ದಾರಿ ಆಗಿದ್ದು ಒಂದು ಊರಿನಿಂದ ಇನ್ನೊಂದು ಊರಿಗೆ ಸಂಪರ್ಕ ಕಲ್ಪಿಸುವ ಸೇತುವೆ ಸಂಪೂರ್ಣ ಕೊಚ್ಚಿಹೋಗಿದೆ.
ಮಾನ್ಯ ಉಡುಪಿ ಜಿಲ್ಲಾಧಿಕಾರಿಗಳು ಬೈಂದೂರು ತಹಸಿಲ್ದಾರ್ ಮತ್ತು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕೂಡಲೇ ಇದಕ್ಕೆ ಸ್ಪಂದಿಸಿ ರೈತರ ಕಷ್ಟಕ್ಕೆ ಸ್ಪಂದಿಸಬೇಕಾಗಿ ಗ್ರಾಮಸ್ಥರ ಆಗ್ರಹವಾಗಿದೆ